ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ
Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಕರ್ನಾಟಕದ ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ನಿನ್ನೆ (ಮೇ 3) ಮಳೆಬಿದ್ದಿದ್ದು, ರಣಬಿಸಲು ಶಾಖದ ಅಲೆಗಳಿಂದ ಕಂಗೆಟ್ಟ ಜನ,ಜಾನುವಾರುಗಳು ಕೊಂಚ ನಿರಾಳವಾಗುವಂತೆ ಮಾಡಿದೆ. ಭೂಮಿಯೂ ಸ್ವಲ್ಪ ಮಟ್ಟಿಗೆ ತಂಪಾಗಿದೆ. ಇಂದು (ಮೇ 4) ) ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಬೀಳಬಹುದು. ಉಳಿದೆಡೆ ಒಣಹವೆ ಮುಂದುವರಿಯಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಇದರಂತೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮಂಡ್ಯ, ತುಮಕೂರು, ವಿಜಯನಗರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಆದಾಗ್ಯೂ ಒಂದೆರಡು ಕಡೆ ಮಳೆಯಾಗಬಹುದು. ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾ...
Click here to read full article from source
To read the full article or to get the complete feed from this publication, please
Contact Us.