ಬಿಸಿಲ ಝಳಕ್ಕೆ ರಾಯಚೂರಲ್ಲಿ ಒಂದೇ ದಿನ 6 ಸಾವು, ಉಡುಪಿಯಲ್ಲಿ ಸೆಖೆ ತಡೆಯದೇ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು
Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಝಳಕ್ಕೆ ರಾಯಚೂರಿನಲ್ಲಿ ಆರು ಜನ ಸಾವನ್ನಪ್ಪಿದ್ದು, ಉಡುಪಿಯಲ್ಲಿ ಸೆಕೆ ಎಂದು ಟೆರೇಸ್ನಲ್ಲಿ ಮಲಗಿದ್ದ ಶಿಕ್ಷಕರೊಬ್ಬರು ಅಲ್ಲಿಂದ ಕೆಳಕ್ಕೆ ಬಿದ್ದು ಮೃತ ಪಟ್ಟ ಘಟನೆ ವರದಿಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಶಾಖದ ಅಲೆ, ಬಿಸಿಲ ಝಳ ಈ ಸಲ ಸ್ವಲ್ಪ ಹೆಚ್ಚೇ ಇತ್ತು. ಮಾರ್ಚ್ 1 ರಿಂದ ಏಪ್ರಿಲ್ 3 ರ ಅವಧಿಯಲ್ಲಿ ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು ಸಂಭವಿಸಿತ್ತು. ರಾಜ್ಯದಲ್ಲಿ ಕಳೆದ ತಿಂಗಳು 500ಕ್ಕೂ ಹೆಚ್ಚು ಬಿಸಿಲಾಘಾತ (Heat Stroke) ಪ್ರಕರಣ ಸಂಭವಿಸಿದ್ದವು.
ಈ ತಿಂಗಳ ಆರಂಭದಲ್ಲೇ ಬಿಸಿಲ ಝಳಕ್ಕೆ ರಾಯಚೂರಿನಲ್ಲಿ ಒಂದೇ ದಿನ (ಮೇ 3) ಐವರು ಮೃತಪಟ್ಟಿದ್ದಾರೆ. ಇದಲ್ಲದೆ, ಮೊನ್ನೆ ಬಿಎಂಟಿಸಿ ನಿರ್ವಾಹಕರೊಬ್ಬರು ಮೃತಪಟ್ಟಿರುವ ವರದಿಯೂ ಬಂದಿದೆ. ಈ ನಡುವೆ, ಕಾರಿಗೆ ಬೆಂಕಿ ಹತ್ತಿಕೊಂಡ ಘಟನೆಯೂ ನಡೆದಿದೆ. ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ಝಳ ತುಸು ಹೆಚ್ಚೇ ಇದೆ. ರಾಜ್ಯದ ಗರಿಷ್ಠ ತಾಪಮಾನ ದಾಖಲಾಗಿರುವುದು ಕೂಡ ಇದೇ ...
Click here to read full article from source
To read the full article or to get the complete feed from this publication, please
Contact Us.