ಮಂಡ್ಯ: ಪಾಂಡವಪುರದಲ್ಲಿ ಭ್ರೂಣಹತ್ಯೆ ಪ್ರಕರಣ ಬೆಳಕಿಗೆ, ಆಂಬುಲೆನ್ಸ್ ಚಾಲಕ ಸೇರಿ 4 ಆರೋಪಿಗಳ ಬಂಧನ
Mandya,Pandavapura,ಮಂಡ್ಯ,ಪಾಂಡವಪುರ,ಬೆಂಗಳೂರು,Bengaluru, ಮೇ 7 -- ಮಂಡ್ಯ: ಭ್ರೂಣ ಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, ಮಂಡ್ಯ ತಾಲೂಕು ಹಾಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣದ ಬಳಿಕ ಈಗ ಪಾಂಡವಪುರದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಪಾಂಡವಪುರ ತಾಲೂಕು ಆರೋಗ್ಯ ಇಲಾಖೆ ವಸತಿ ಗೃಹ ಬಳಕೆಯಾಗಿದೆ. ಈ ಸಂಬಂಧ ಪೊಲೀಸರು ಆಂಬುಲೆನ್ಸ್ ಚಾಲಕ ಸೇರಿ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಬುಲೆನ್ ಚಾಲಕ ಆನಂದ್ (37), ಹೊರಗುತ್ತಿಗೆ ಡಿ-ಗ್ರೂಪ್ ಸಿಬ್ಬಂದಿ ಅಶ್ವಿನಿ (32), ಆಕೆಯ ತಾಯಿ ಸತ್ಯಮ್ಮ (54), ಪಾಂಡವಪುರದ ಖಾಸಗಿ ನರ್ಸಿಂಗ್ ಹೋಮ್ನ ಡಿ-ಗ್ರೂಪ್ ಸಿಬ್ಬಂದಿ ಗಿರಿಜಮ್ಮ (48) ಎಂದು ಗುರುತಿಸಲಾಗಿದೆ. ಈ ಪೈಕಿ ಅಶ್ವಿನಿ ಎಂಬಾಕೆ ಆನಂದ್ನ ಪತ್ನಿ. ಅಶ್ವಿನಿಯ ತಾಯಿ ಸತ್ಯಮ್ಮ. ಪ್ರಸವ ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದ ಗಿರಿಜಮ್ಮ ಇವರೊಂದಿಗೆ ಕೈ ಜೋಡಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಂಡವಪುರ ತಾಲೂಕು ಆರೋಗ್ಯ ಇಲಾಖೆ ವಸತಿ ಗೃಹವನ್ನು ...
Click here to read full article from source
To read the full article or to get the complete feed from this publication, please
Contact Us.