ಭಾರತ, ಮೇ 4 -- Shivarajkumar on Kumar Bangarappa: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಬಿರುಸು ಪಡೆದುಕೊಂಡಿದೆ. ಮೊದಲ ಹಂತದ ಚುನಾವಣೆಯ ಬಳಿಕ ಎರಡನೇ ಹಂತದ ಚುನಾವಣೆಯ ಪ್ರಚಾರ ಕೆಲಸವೂ ಜೋರಾಗಿಯೇ ನಡೆಯುತ್ತಿವೆ. ಅದರಲ್ಲೂ ಹಲವು ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಅವರ ಪರವಾಗಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ ಶಿವಣ್ಣ. ಈ ನಡುವೆ ಕುಮಾರ ಬಂಗಾರಪ್ಪ ವಿರುದ್ಧ ಪ್ರಚಾರದ ವೇಳೆಯೇ ಸಿಡಿದೆದ್ದಿದ್ದಾರೆ.

ಪ್ರಚಾರದ ಸಮಯದಲ್ಲಿ ಈ ವರೆಗೂ ನಟ ಶಿವಣ್ಣ ಯಾರ ವಿರುದ್ಧವೂ ಮಾತನಾಡಿರಲಿಲ್ಲ. ಆದರೆ, ಶುಕ್ರವಾರ ಮಾತ್ರ ಅವರ ಆಕ್ರೋಶದ ಕಟ್ಟೆಯೊಡೆದಿತ್ತು. ಅದಕ್ಕೆ ಕಾರಣ; ಕೆಲ ದಿನಗಳ ಹಿಂದಷ್ಟೇ ಕುಮಾರ ಬಂಗಾರಪ್ಪ ನೀಡಿದ್ದ ಹೇಳಿಕೆ. ಇನ್ನೇನು ಚುನಾವಣೆ ಮುಗೀತಿದ್ದಂತೆ, ಗೀತಾ ಶಿವರಾಜ್‌ಕುಮಾರ್‌ ಮನೆ ಖಾಲಿ ಮಾಡಿಕೊಂಡು ಹೋಗಲಿದ್ದಾರೆ ಎಂದಿದ್ದರು. ಕುಮ...