ಭಾರತ, ಮೇ 5 -- Harshika Poonacha: ಮಹಿಳಾ ವರ್ಗವನ್ನೇ ತಲೆತಗ್ಗಿಸುವಂತೆ ಮಾಡಿರುವ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನೆಗಳೂ ನಡೆಯುತ್ತಿವೆ. ಈ ಕೂಡಲೇ ಆರೋಪಿ ಸ್ಥಾನದಲ್ಲಿರುವವರನ್ನು ಬಂಧಿಸುವಂತೆಯೂ ಆಗ್ರಹಿಸುತ್ತಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ತಂದೆ ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ತಲೆ ಮರೆಸಿಕೊಂಡಿದ್ದ ಎಚ್‌ಡಿ ರೇವಣ್ಣ ಅವರನ್ನು ಅತ್ಯಾಚಾರ ಸಂತ್ರಸ್ತೆಯ ಅಪಹರಣ ಕೇಸ್‌ನಡಿ ಶನಿವಾರ ಬಂಧಿಸಲಾಗಿದೆ.

ಈ ನಡುವೆ ಇದೇ ಪ್ರಕರಣಕ್ಕೆ ರಾಜಕೀಯ ಲೇಪನ ಮಾಡಲಾಗುತ್ತಿದ್ದು, ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜಕೀಯ ಮಂದಿಯ ಹೇಳಿಕೆಯ ಜತೆಗೆ ಸಿನಿಮಾ ಮಂದಿಯೂ ರೊಚ್ಚಿಗೆದ್ದಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳೂ ಈ ಬಗ್ಗೆ ಧ್ವನಿ ಎತ್ತಿದ್ದು, ಬಾಲಿವುಡ್‌ ನಟಿ ಸ್ವರಾ ಭಾಸ್ಕರ್‌ ಸಹ "ಒಂದು ವೇಳೆ ಪ್ರಜ್ವಲ್...