Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಐಪಿಎಲ್ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ದಿನಗಳಲ್ಲಿ ಅಂದರೆ, ಇಂದು (ಮೇ 4), 12 ಮತ್ತು 18 ರಂದು ಕ್ರೀಡಾಂಗಣ ಸಮೀಪದಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್‌ ಸೇವೆಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಘೋಷಿಸಿದೆ. ಈ ಬಸ್‌ ಸೇವೆಯಿಂದ ಐಪಿಎಲ್ ಪಂದ್ಯ ವೀಕ್ಷಿಸಲು ಬರುವ ಐಪಿಎಲ್ ಅಭಿಮಾನಿಗಳಿಗೆ ಆರ್‌ಸಿಬಿ ಅಭಿಮಾನಿಗಳಿಗೆ ಅನುಕೂಲವಾಗಲಿದೆ.

ವಿಶೇಷವಾಗಿ ಸಂಚಾರದಟ್ಟಣೆ ಹೆಚ್ಚಿರುವ ಸಂದರ್ಭದಲ್ಲಿ ಕ್ರೀಡಾಂಗಣಕ್ಕೆ ಪ್ರಯಾಣಿಸುವಾಗ ಎದುರಾಗುವ ಸವಾಲುಗಳಿಗೆ ಪರಿಹಾರವಾಗಲಿದೆ. ಬಸ್ ಕಾರ್ಯಾಚರಣೆಗಳನ್ನು ವಿಸ್ತರಿಸುವ ಮೂಲಕ, ಕ್ರೀಡಾಂಗಣದ ಪ್ರದೇಶದ ಸುತ್ತಲಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರೇಕ್ಷಕರಿಗೆ ಆರಾಮದಾಯಕ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿರುವುದಾಗಿ ಬಿಎಂಟಿಸಿ ಹೇಳಿಕೊಂಡಿದೆ.

ಇದನ್ನೂ ಓದಿ| ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ...