Mangaluru Rains: 10 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು; ಸುಬ್ರಹ್ಮಣ್ಯದಲ್ಲಿ ಘಟನೆ
ಭಾರತ, ಮೇ 4 -- ಮಂಗಳೂರು: ಬಿಸಿಲಿನ ತಾಪದಿಂದ ಇಡೀ ರಾಜ್ಯವೇ ಕಂಗೆಟ್ಟಿರುವ ಹೊತ್ತಿನಲ್ಲಿ ಕೆಲವೆಡೆ ವರುಣರಾಯ ದರ್ಶನ ತೋರಿದ್ದಾನೆ. ಮಳೆಯ ಜೊತೆಗೆ ಗುಡುಗು ಸಿಡಿಲು ಜೋರಾಗಿದೆ. ಶುಕ್ರವಾರ ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಅವರು 10 ದಿನಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗುತ್ತಿದೆ. ಸುಬ್ರಹ್ಮಣ್ಯದ ಕಡಬದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತರು. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ. ಸೋಮಸುಂದರ್ ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ...
Click here to read full article from source
To read the full article or to get the complete feed from this publication, please
Contact Us.