ಭಾರತ, ಮೇ 5 -- Sathyam: ನಿರ್ದೇಶಕ ಅಶೋಕ್ ಕಡಬ ಇದೀಗ 'ಸತ್ಯಂ' ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿದೆ. ಈ ಹಿಂದೆ ಸತ್ಯಂ ಟೀಸರ್ ಬಿಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್‌ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಹರಿದು ಬಂದಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸಿನಿಮಾ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯುಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಸಿಕ್ಕಿದ್ದಕ್ಕೆ ಚಿತ್ರತಂಡ ಖುಷಿಯಲ್ಲಿದೆ.

ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಸೀರಿಯಲ್‌ ಸಿನಿಮಾಗಳಲ್ಲಿ ಬಿಜಿಯಾಗಿರುವ ರಂಜಿನಿ ರಾಘವನ್ ಈ ಚಿತ್ರದ ನಾಯಕಿ. ಈ ಹಿಂದಿನ ರಂಗಿತರಂಗ, ಕಾಂತಾರ ಸಿನಿಮಾಗಳಲ್ಲಿ ತುಳುನಾಡ ದೈವಾರಾಧನೆ ಇತ್ತು. ಆ ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ 'ಸತ್ಯಂ'. ಹಾಗೆಂದ ಮಾತ್ರಕ್...