Vijayapura, ಏಪ್ರಿಲ್ 28 -- ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಮಗು ಆಳದ ಕಂದಕಕ್ಕೆ ಬಿದ್ದು ಬದುಳಿದ ಪವಾಡ ನಡೆದ ಘಟನೆ ಮಾಸುವ ಮುನ್ನವೇ ಅದೇ ಗ್ರಾಮದ ಪ್ರಸಿದ್ದ ಜಾತ್ರೋತ್ಸವದಲ್ಲಿ ರಥ ಉರುಳಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆ ಹಿನ್ನೆಲೆಯಲ್ಲಿ ಆತಂಕಗೊಂಡ ಭಕ್ತರು ಅತ್ತಿತ್ತ ಓಡಿದ್ದರಿಂದ ಅನಾಹುತವಾಗಿದೆ. ಅದರೆ ಅಲ್ಲಿದ್ದವರು ಸಮಾಧಾನಪಡಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ರಥೋತ್ಸವಕ್ಕೂ ಮುನ್ನ ಗ್ರಾಮದಲ್ಲಿ ಭದ್ರತೆ ಹಾಕಲಾಗಿತ್ತಾದರೂ ಪೊಲೀಸ್‌ ಕಡಿಮೆ ಸಂಖ್ಯೆಯಲ್ಲಿದ್ದರು ದುರಂತದ ನಂತರ ಹೆಚ್ಚಿನ ಪೊಲೀಸರು ಅಲ್ಲಿ ನಿಯೋಜನೆಗೊಂಡಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿಯೇ ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವ ಬಹು ಜನಪ್ರಿಯ.ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ ಭಾಗದಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಒಂದು ವಾರದಿಂದಲೂ ನಾನಾ ಧಾರ್ಮಿಕ ಚಟುವಟಿಕೆಗಳು ಜಾತ್ರಾ ಮಹೋತ್ಸವ ಹಿನ್ನೆಲೆಯಲ...